ADVERTISEMENT

ಮಲೆಯೂರಿನಲ್ಲಿ ಬಾಹುಬಲಿ ಮೂರ್ತಿಗೆ ಮಹಾಮಸ್ತಾಭಿಷೇಕ: ದೇಶೀಕೇಂದ್ರ ಸ್ವಾಮೀಜಿ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಮೇ 2022, 6:25 IST
Last Updated 1 ಮೇ 2022, 6:25 IST
   

ಚಾಮರಾಜನಗರ: ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಶ್ರೀ ಕನಕಕ್ಷೇತ್ರದಲ್ಲಿ ನಡೆಯುತ್ತಿರುವ ಕನಕಗಿರಿ ಅತಿಶಯ ಮಹೋತ್ಸವ ಅಂಗವಾಗಿ ಬಾಹುಬಲಿ ಸ್ವಾಮಿಗೆ ಮಹಾಮಸ್ತಾಭಿಷೇಕಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರು ಚಾಲನೆ ನೀಡಿದರು. ಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಿಹಂತಗಿರಿ ಕ್ಷೇತ್ರದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಇತರರು ಇದ್ದರು.

2017ರ ಫೆಬ್ರುವರಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ 18 ಅಡಿ ಎತ್ತರದ ಬಾಹುಬಲಿಯ ಮೂರ್ತಿಗೆ ನಡೆಯುತ್ತಿರುವ ಇದು ಎರಡನೇ ಮಹಾಮಸ್ತಕಾಭಿಷೇಕವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT