ಚಾಮರಾಜನಗರ: ತಾಲ್ಲೂಕಿನ ಬೇಡರಪುರ ಕ್ರಾಸ್ ಬಳಿ ಬುಧವಾರ ರಾತ್ರಿಎರಡು ಬೈಕ್ಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಬ್ಬ ಸವಾರ ಮೃತಪಟ್ಟಿದ್ದಾರೆ.
ಬೇಡರಪುರ ಗ್ರಾಮದ ಸಿದ್ದಪ್ಪಾಜಿ (43) ಮೃತಪಟ್ಟವರು.
ಚಾಮರಾಜನಗರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಿದ್ದಪಾಜಿ ಅವರ ಬೈಕ್ಗೆ ಹಿಂದಿನಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಅವರ ತಲೆಗೆ ತೀವ್ರ ಏಟಾಗಿತ್ತು.
ಹೆದ್ದಾರಿಯಲ್ಲಿ ಗಸ್ತು ತಿರುಗಿತ್ತಿದ್ದ ಪೊಲೀಸರು ತಮ್ಮ ವಾಹನದಲ್ಲಿ ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು.
ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.