ADVERTISEMENT

ಬಿಆರ್‌ಟಿ: ಪುಣಜನೂರು ವಲಯದಲ್ಲಿ ಬೆಂಕಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 15:18 IST
Last Updated 5 ಏಪ್ರಿಲ್ 2020, 15:18 IST

ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದೆ.

ವಲಯದ ಕುರಿಮಂದೆಅಣೆ ಪ್ರದೇಶದಲ್ಲಿ ಮಧ್ಯಾಹ್ನ 12ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೇಡಗುಳಿಗೆ ಹೋಗುವ ದಾರಿಯಲ್ಲಿ ಬೆಂಕಿ ಬಿದ್ದಿದ್ದು, ಆಗಸದೆತ್ತರಕ್ಕೆ ದಟ್ಟ ಹೊಗೆ ಆವರಿಸಿತ್ತು ಎಂದು ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಬೆಂಕಿ ಬಿದ್ದಿರುವುದನ್ನು ದೃಢಪಡಿಸಿರುವ ಬಿಆರ್‌ಟಿ ಉಪ ಸಂರಕ್ಷಣಾಧಿಕಾರಿ ಜಿ.ಸಂತೋಷ್‌ಕುಮಾರ್‌ ಅವರು, ‘ಮಧ್ಯಾಹ್ನ 12 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು. ಒಂದು ಗಂಟೆಯ ಅವಧಿಯಲ್ಲಿ ಅದನ್ನು ನಂದಿಸಿದ್ದೇವೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.