ADVERTISEMENT

ಸಂತೇಮರಹಳ್ಳಿ ಬಳಿ ಖಾಸಗಿ ಬಸ್‌ ಪಲ್ಟಿ; 10 ಜನರಿಗೆ ಗಾಯ, ಮೂವರು ಗಂಭೀರ

40 ಮಂದಿ ಪಾರು

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2019, 15:53 IST
Last Updated 26 ಡಿಸೆಂಬರ್ 2019, 15:53 IST
ಬಸ್‌ ಅಪಘಾತಕ್ಕೀಡಾಗಿರುವುದು
ಬಸ್‌ ಅಪಘಾತಕ್ಕೀಡಾಗಿರುವುದು   

ಸಂತೇಮರಹಳ್ಳಿ: ಹೋಬಳಿ ಕೇಂದ್ರದಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಕಮರವಾಡಿ ಗೇಟ್ ಬಳಿ ಗುರುವಾರ ಸಾಯಂಕಾಲಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, 10 ಜನರಿಗೆ ಗಾಯಗಳಾಗಿವೆ. ಮೂವರ ಸ್ಥಿತಿ ಗಂಭೀರವಾಗಿದೆ.

ಬಸ್‌ನಲ್ಲಿ ಮಕ್ಕಳು ಸೇರಿದಂತೆ 50 ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್‌ 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ತಿ.ನರಸೀಪುರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಮರಾಜನಗರದಿಂದ ಹೊಂಗನೂರು, ಚಾಟೀಪುರ ಹಾಗೂ ಯಳಂದೂರು ಮಾರ್ಗವಾಗಿ ಸಂತೇಮರಹಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹಾಗಾಗಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಬಿದ್ದಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ತಕ್ಷಣಕ್ಕೆ ಗಾಯಗೊಂಡವರ ವಿವರ ತಿಳಿದು ಬಂದಿಲ್ಲ ಎಂದು ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.