ಚಾಮರಾಜನಗರ: ವೃತ್ತಿ ಪರ ಕೋರ್ಸ್ಗಳ ಪ್ರವೇಶಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಜಿಲ್ಲೆಯಲ್ಲಿ ಎರಡನೇ ದಿನವಾದ ಶುಕ್ರವಾರ ಸುಗಮವಾಗಿ ನಡೆಯಿತು.
ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 1,420 ವಿದ್ಯಾರ್ಥಿಗಳ ಪೈಕಿ 1,300 ಮಂದಿ ಜಿಲ್ಲೆಯ ಐದು ಪರೀಕ್ಷಾ ಕೇಂದ್ರಗಳಲ್ಲಿ ಎರಡನೇ ದಿನ ಪರೀಕ್ಷೆ ಬರೆದಿದ್ದಾರೆ. ಬೆಳಿಗ್ಗೆ ಭೌತವಿಜ್ಞಾನ ವಿಷಯದ ಪರೀಕ್ಷೆ ನಡೆದರೆ, ಮಧ್ಯಾಹ್ನ ಮೇಲೆ ರಸಾಯನವಿಜ್ಞಾನಪರೀಕ್ಷೆ ನಡೆಯಿತು.
ಕೋವಿಡ್–19ಗೆ ತುತ್ತಾಗಿದ್ದ ವಿದ್ಯಾರ್ಥಿನಿಯೊಬ್ಬರು ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆ ಬರೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.