ADVERTISEMENT

ಹೆಗ್ಗೋಠಾರ ಟ್ಯಾಂಕ್ ಶುದ್ಧೀಕರಣ ಮಾಡಿದ ಪ್ರಕರಣ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 7:39 IST
Last Updated 22 ನವೆಂಬರ್ 2022, 7:39 IST
ಆರೋಪಿಯ ಬಂಧನಕ್ಕೆ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ
ಆರೋಪಿಯ ಬಂಧನಕ್ಕೆ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ   

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಪರಿಶಿಷ್ಟ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಕಿರು ನೀರು‌ ಸರಬರಾಜು ಘಟಕದ ನೀರು ಖಾಲಿ ಮಾಡಿ ಶುದ್ಧೀಕರಣ ಮಾಡಿದ ಪ್ರಕರಣದ ಆರೋಪಿ ಮಹದೇವಪ್ಪ ಅವರನ್ನು ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.

ಆರೋಪಿಯ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಆರೋಪಿಯ ಬಂಧನವಾಗಿರುವುದರಿಂದ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

ADVERTISEMENT

'ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೀಗಾಗಿ ಪ್ರತಿಭಟನೆ ಕೈ ಬಿಟ್ಟಿದ್ದೇವೆ. ಗ್ರಾಮದಲ್ಲಿ ಇನ್ನೂ ಸಮಸ್ಯೆಗಳಿವೆ. ಅದನ್ನು ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಿದ್ದೇವೆ' ಎಂದು ಹೆಗ್ಗೋಠಾರ ಗ್ರಾಮದ ಪರಿಶಿಷ್ಟ ಸಮುದಾಯದ ಮುಖಂಡ ಕುಮಾರ್ ಹೇಳಿದರು.

ಬಂಧನವನ್ನು ಪೊಲೀಸರು ಖಚಿತ ಪಡಿಸಿದ್ದಾರೆ. ಹೆಚ್ಚಿನಮಾಹಿತಿನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.