ADVERTISEMENT

ಚಾಮರಾಜನಗರ: ಆಗಸ್ಟ್‌ನಲ್ಲಿ ಸಂವಿಧಾನೋತ್ಸವ ಸಮಾವೇಶ

​ಪ್ರಜಾವಾಣಿ ವಾರ್ತೆ
Published 9 ಜುಲೈ 2023, 14:06 IST
Last Updated 9 ಜುಲೈ 2023, 14:06 IST
ಚಾಮರಾಜನಗರ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ನಡೆದ ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು
ಚಾಮರಾಜನಗರ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ನಡೆದ ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು   

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ವತಿಯಿಂದ ಆಗಸ್ಟ್ ಮೊದಲ ವಾರದಲ್ಲಿ ಸಂವಿಧಾನೋತ್ಸವ ಹಾಗೂ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಲಿದೆ. 

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಿಎಸ್‌ಎಸ್ ಐಕ್ಯತಾ ಹೋರಾಟ ಚಾಲನಾ ಸಮಿತಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು ಸಭೆಯಲ್ಲಿ ಸಂವಿಧಾನೋತ್ಸವ ಆಯೋಜನೆ ಬಗ್ಗೆ ಮಾಹಿತಿ ನೀಡಿದರು. 

ADVERTISEMENT

ಐಕ್ಯತಾ ಹೋರಾಟ ಚಾಲನಾ ಸಮಿತಿಯ 13 ಬೇಡಿಕೆಗಳನ್ನು ಸರ್ಕಾರಕ್ಕೆ ಮಂಡಿಸಲೂ ಸಭೆಯಲ್ಲಿ ತೀರ್ಮಾನಿಸಲಾಯಿತು. 

ಸಮಿತಿ ಮುಖಂಡರಾದ  ಸಿ.ಎಂ.ಶಿವಣ್ಣ, ರಾಮಸಮುದ್ರ ಸುರೇಶ್, ಯರಿಯೂರು ರಾಜಣ್ಣ, ಸುಭಾಷ್‌ ಮಾಡ್ರಳ್ಳಿ, ಕಂದಹಳ್ಳಿ ನಾರಾಯಣ, ನಂಜುಂಡಸ್ವಾಮಿ, ಉಮ್ಮತ್ತೂರು ಸೋಮಣ್ಣ, ಹೊನ್ನೂರು ರಾಜೇಂದ್ರ, ರಂಗಸ್ವಾಮಿ ಗುಂಡ್ಲುಪೇಟೆ, ಸಿದ್ದರಾಜು, ಶಿವಕುಮಾರ್, ಸುರೇಂದ್ರಕುಮಾರ್, ನಾಗಶೇಖರ್, ರಾಮಸಮುದ್ರ ಸಿದ್ದರಾಜು, ಸಾಹಿತಿ ಸಿದ್ದರಾಜು, ಮರಿಯಾಲದಹುಂಡಿ ಕುಮಾರ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.