ADVERTISEMENT

ಚಾಮರಾಜನಗರ: ಅರಣ್ಯಾಧಿಕಾರಿ ಮೇಲೆ ಹುಲಿ ದಾಳಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 10:49 IST
Last Updated 1 ಜುಲೈ 2019, 10:49 IST
   

ಗುಂಡ್ಲುಪೇಟೆ:ತಾಲೂಕಿನ ಬಂಡೀಪುರ ಅರಣ್ಯದ ಅಂಚಿನ ಕಲೀಗೌಡನಹಳ್ಳಿಯ ಜಮೀನಿನಲ್ಲಿ ಆರ್‌ಎಫ್‌ಒ ರಾಘವೇಂದ್ರ ಅಗಸಿ ಅವರ ಮೇಲೆ ಹುಲಿ ದಾಳಿ ನಡೆಸಿ ಘಾಸಿಗೊಳಿಸಿದೆ.

ಸೋಮವಾರ ಗ್ರಾಮದ ಶ್ರೀನಿವಾಸ ಎಂಬುವರ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡಿದೆ ಎಂಬ ಗ್ರಾಮಸ್ಥರ ಮಾಹಿತಿ ಆಧರಿಸಿ ಬಂಡೀಫುರ ಹುಲಿ ಸಂರಕ್ಷಿತಾರಣ್ಯದ ಗೋಪಾಲಸ್ವಾಮಿ ಬೆಟ್ಟ ವಲಯದ ಆರ್‌ಎಫ್‌ಒ ರಾಘವೇಂದ್ರ ಅವರು ಸಿಬ್ಬಂದಿ ಜತೆ ತೆರಳಿದ್ದರು.

ಜಮೀನಿನಲ್ಲಿ ಹುಲಿಗಾಗಿ ಹುಡುಕಾಡುವಾಗ ಆರ್ ಎಫ್ ಒ ಮೇಲೆ ದಿಢೀರನೆ ಹುಲಿ ದಾಳಿ ಮಾಡಿದ್ದರಿಂದ ಗಾಯಗೊಂಡಿದ್ದಾರೆ.

ADVERTISEMENT

ತಕ್ಷಣ ಅವರನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.