ADVERTISEMENT

ನೂತನ ಜಿ.ಪಂ ಅಧ್ಯಕ್ಷರಿಗೆ ಅಭಿನಂದಿಸದ ಆಯುಕ್ತರು, ಕಾಂಗ್ರೆಸ್ ಸದಸ್ಯರ ಆಕ್ರೋಶ

ಚಾಮರಾಜನಗರ

​ಪ್ರಜಾವಾಣಿ ವಾರ್ತೆ
Published 30 ಮೇ 2020, 7:16 IST
Last Updated 30 ಮೇ 2020, 7:16 IST
ಚಾಮರಾಜನಗರ ಜಿಲ್ಲಾ ಪಂಚಾಯಿತಿಯಲ್ಲಿ ಸಭೆ
ಚಾಮರಾಜನಗರ ಜಿಲ್ಲಾ ಪಂಚಾಯಿತಿಯಲ್ಲಿ ಸಭೆ   

ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಎಂ.ಅಶ್ವಿನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿದ್ದ ಮೈಸೂರು ವಿಭಾಗೀಯ ಆಯುಕ್ತ ಜಯರಾಂ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ಎಂ.ಅಶ್ವಿನಿ ಅವರನ್ನು ಅಭಿನಂದಿಸಿದೇ ಹೋಗಿದ್ದಾರೆ ಎಂದು ಉಪಾಧ್ಯಕ್ಷ ಕೆ.ಎಸ್.ಮಹೇಶ್ ಹಾಗೂ ಕಾಂಗ್ರೆಸ್ ಸದಸ್ಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋವಿಡ್-19 ಕಾರಣಕ್ಕೆ ಅವರು ದೂರದಿಂದಲೇ ಅಭಿನಂದಿಸಿದ್ದಾರೆ ಎಂದು ಅಧಿಕಾರಿಗಳ ಸಮಜಾಯಿಷಿ ನೀಡಿದ್ದಾರೆ.

ADVERTISEMENT

ಪರಿಶಿಷ್ಟ ವರ್ಗದ ಮಹಿಳೆಗೆ ಅವಮಾನ ಮಾಡುತ್ತಿದ್ದೀರಿ. ಕ್ಯಾಬಿನೆಟ್ ಸ್ಥಾನಮಾನದ ಸ್ಥಾನಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಅಪಮಾನ ಮಾಡುತ್ತಿದ್ದೀರಿ‌ ಎಂದು ಸದಸ್ಯರ ಆರೋಪ ಮಾಡಿದ್ದಾರೆ. ಪ್ರಾದೇಶಿಕ ಆಯುಕ್ತರು ವಾಪಸ್ ಬರಲು ಪಟ್ಟು ಹಿಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.