ಚಾಮರಾಜನಗರ: ಬಿಆರ್ಟಿ ಅರಣ್ಯ ವ್ಯಾಪ್ತಿಯ ಹರವೆ ಹೋಬಳಿ ತೆರಕಣಾಂಬಿ ಸಮೀಪದ ಕೊತ್ತಲವಾಡಿಯ ಕರಿಕಲ್ಲು ಕ್ವಾರಿಯಲ್ಲಿ ಗುರುವಾರ ಚಿರತೆಯ ಕಳೇಬರ ಪತ್ತೆಯಾಗಿದೆ.
ಮೃತ ಗಂಡು ಚಿರತೆಯು 5ರಿಂದ 6 ವರ್ಷ ವಯಸ್ಸಿನದ್ದಾಗಿದ್ದು, ಸಮೀಪದಲ್ಲೇ ನಾಯಿ ಹಾಗೂ ಕರುವಿನ ಕಳೇಬರವೂ ಪತ್ತೆಯಾಗಿದೆ.
ಚಿರತೆಯು ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಚಿರತೆ ಸಾವಿನ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಬಿಆರ್ಟಿ ಡಿಸಿಎಫ್ ಶ್ರೀಪತಿ, ಎಸಿಎಫ್ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈಚೆಗಷ್ಟೆ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಐದು ಹುಲಿಗಳು ವಿಷಪ್ರಾಶನದಿಂದ ಸಾವಿಗೀಡಾಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.