ADVERTISEMENT

ಬೋಸ್ ವಿರುದ್ದ ಅಪಪ್ರಚಾರ: ಡಿ.ಸಿಗೆ ದೂರು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 16:13 IST
Last Updated 18 ಏಪ್ರಿಲ್ 2024, 16:13 IST
ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ವಿಭಾಗದ ಹೇಮಂತ್‌ ಕುಮಾರ್‌ ಮತ್ತು ಸೈಯದ್‌ ಅವರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ದೂರು ನೀಡಿದರು
ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ವಿಭಾಗದ ಹೇಮಂತ್‌ ಕುಮಾರ್‌ ಮತ್ತು ಸೈಯದ್‌ ಅವರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ದೂರು ನೀಡಿದರು   

ಚಾಮರಾಜನಗರ: ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ವಿರುದ್ದ ಅಪಪ್ರಚಾರ ನಡೆಸಿರುವವರ ವಿರುದ್ದ ಕಾಂಗ್ರೆಸ್‌ ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರಿಗೆ ದೂರು ನೀಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮೈಸೂರು ಗ್ರಾಮಾಂತರ ಹಾಗೂ ಚಾಮರಾಜನಗರದ ಪದಾಧಿಕಾರಿಗಳಾದ ಹೇಮಂತ್ ಕುಮಾರ್ ಹಾಗೂ ಸೈಯದ್ ಅವರು ನಗರದ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು.

‘ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಮಹದೇವಸ್ವಾಮಿ ಎನ್ ಹೊಂಗನೂರು, ಮಂಜು ಶಿವಪುರ, ಮೂರ್ತಿ ಮುತ್ತಿಗೆ, ಯೋಗೇಶ್ ಸಾಂಗ್ಲಿಯಾನ ಹಾಗೂ ಚರಣ್ ಎಂಬುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.