ADVERTISEMENT

ಕ್ಯಾಲೆಂಡರ್‌ ಬದಲಾದ ಹಾಗೆ ಸಿ.ಎಂ. ಬದಲು: ಮಹದೇವಪ್ಪ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 16:29 IST
Last Updated 10 ಆಗಸ್ಟ್ 2022, 16:29 IST
ಡಾ.ಎಚ್.ಸಿ.ಮಹದೇವಪ್ಪ
ಡಾ.ಎಚ್.ಸಿ.ಮಹದೇವಪ್ಪ   

ಚಾಮರಾಜನಗರ: ರಾಜ್ಯದಲ್ಲಿರುವ ಈ ಸರ್ಕಾರದಲ್ಲಿ ಕ್ಯಾಲೆಂಡರ್‌ ಬದಲಾದ ಹಾಗೆ ಮುಖ್ಯಮಂತ್ರಿಗಳೂ ಬದಲಾಗುತ್ತಾರೆ ಎಂದು ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಮಹದೇವಪ್ಪ ಬುಧವಾರ ವ್ಯಂಗ್ಯವಾಡಿದರು.

ಆಗಸ್ಟ್‌ 15ರ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ವದಂತಿ ಹಾಗೂ ಈ ಸಂಬಂಧ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಬಗ್ಗೆನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ಕಳೆದ ಬಾರಿ ಯಡಿಯೂರಪ್ಪ, ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್‌ ಆದರು. ಈ ಬಾರಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಆಗಿದ್ದಾರೆ. ಮತ್ತೆ ಇನ್ನೊಬ್ಬರು ಆದರೆ ಆಶ್ಚರ್ಯ ಇಲ್ಲ’ ಎಂದರು.

‘ಬಿಜೆಪಿಗೆ ಜನರು ಸಂಪೂರ್ಣ ಬೆಂಬಲ ಕೊಟ್ಟಿಲ್ಲ.ಇದೊಂದು ಅಸ್ಥಿರ ಸರ್ಕಾರ. ಏನು ಬೇಕಾದರೂ ಆಗಬಹುದು’ ಎಂದು ಹೇಳಿದರು.

ADVERTISEMENT

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಕೇಳಿದ ಪ್ರಶ್ನೆಗೆ, ‘ಎಸ್‌ಸಿ, ಎಸ್‌ಟಿ ಕ್ಷೇತ್ರ ಬಿಟ್ಟು ಬೇರೆ ಎಲ್ಲೇ ನಿಂತರೂ ಸಿದ್ದರಾಮಯ್ಯ ಗೆಲ್ಲುತ್ತಾರೆ’ ಎಂದು ಮಹದೇವಪ್ಪ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.