ADVERTISEMENT

ಕಾನ್‌ಸ್ಟೆಬಲ್‌ಗೆ ಸೋಂಕು: ಹನೂರು ತಾಲೂಕಿನ ಗ್ರಾಮದಲ್ಲಿ 18 ಮಂದಿ ಕ್ವಾರಂಟೈನ್‌ಗೆ

​ಪ್ರಜಾವಾಣಿ ವಾರ್ತೆ
Published 5 ಮೇ 2020, 6:20 IST
Last Updated 5 ಮೇ 2020, 6:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹನೂರು‌: ಬೆಂಗಳೂರಿನ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಕಾನ್‌ಸ್ಟೆಬಲ್ ಒಬ್ಬರಿಗೆ ಕೋವಿಡ್- 19 ದೃಢಪಟ್ಟಿರುವ ಬೆನ್ನಲ್ಲೇ ತಾಲ್ಲೂಕಿನ ಗ್ರಾಮವೊಂದರ 18 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಕಾನ್‌ಸ್ಟೆಬಲ್ ಅವರು ಸೋಮವಾರ ಬೆಳಿಗ್ಗೆ ಬೆಂಗಳೂರಿನಿಂದ ತಮ್ಮ ಊರಿಗೆ ಬಂದಿದ್ದರು. ಅವರಿಗೆ ಸೋಂಕು ತಗುಲಿರುವುದು ಪರೀಕ್ಷೆ ವರದಿಯಿಂದ ಖಚಿತವಾಗುತ್ತಿದ್ದಂತೆಯೇ ಬೆಂಗಳೂರಿಂದ ಅವರಿಗೆ ವಾಪಸ್ ಬರುವಂತೆ ಕರೆ ಬಂದಿತ್ತು. ಅವರು ಹಿಂದಿರುಗಿದ ಬಳಿಕ, ಕುಟುಂಬದ ಸದಸ್ಯರು ಹಾಗೂ ಕುಟುಂಬದ ಸದಸ್ಯರನ್ನು ರಾತ್ರಿ ಚಾಮರಾಜನಗರಕ್ಕೆ ಕರೆದೊಯ್ಯಲಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಈ ಬಗ್ಗೆ ‌ನಮಗಿನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಪರಿಶೀಲನೆ ಮಾಡುತ್ತಿದ್ದೇವೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಂ.ಸಿ.ರವಿ ಅವರು 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ಜಿಲ್ಲೆಯು ಹಸಿರುವಲಯದಲ್ಲಿದ್ದ ಎರಡು ವಾರಗಳಿಂದ ಕ್ವಾರಂಟೈನ್ ಕೇಂದ್ರದಲ್ಲಿ ಯಾರೂ ಇರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.