ADVERTISEMENT

ಕೊರೊನ ವೈರಸ್ ಸೋಂಕು ಸುಳ್ಳು ಸುದ್ದಿ: ಎಸ್ಪಿಗೆ ಆರೋಗ್ಯ ಇಲಾಖೆ ದೂರು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2020, 15:12 IST
Last Updated 13 ಮಾರ್ಚ್ 2020, 15:12 IST

ಚಾಮರಾಜನಗರ: ಗುಂಡ್ಲುಪೇಟೆಯ ಮಹೇಶ್ ಹಾಗೂ ಕೊಳ್ಳೇಗಾಲದ ಸಹನಾ ಎಂಬುವವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬ ಸುದ್ದಿ ಟಿವಿ ವಾಹಿನಿಯೊಂದರಲ್ಲಿ ಬಿತ್ತರವಾದಂತಿರುವ ಫೋಟೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.

ಇದು ಸುಳ್ಳು ಸುದ್ದಿಯಾಗಿದ್ದು, ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು‌ ಜಿಲ್ಲಾ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ಎಸ್ ಪಿ ಎಚ್.ಡಿ.ಆನಂದ ಕುಮಾರ್ ಅವರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.