ಚಾಮರಾಜನಗರ: ಕೋವಿಡ್ -19 ನಿಂದಾಗಿ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಶನಿವಾರ ತಡ ರಾತ್ರಿಯೇ ನೆರವೇರಿಸಲಾಗಿದ್ದು, ಪಿಎಫ್ಐ ಕಾರ್ಯಕರ್ತರು ಈ ಕಾರ್ಯವನ್ನು ನಿರ್ವಹಿಸಿದ್ದಾರೆ.
ಚಾಮರಾಜನಗರದ ಬಳಿ ಸರ್ಕಾರ ಗುರುತಿಸಿರುವ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.
ಕೋವಿಡ್ನಿಂದ ಮೃತ ಪಟ್ಟವರ ಅಂತ್ಯಸಂಸ್ಕಾರವನ್ನು ಸರ್ಕಾರದ ಶಿಷ್ಟಾಚಾರ ಅನುಸಾರ ಮಾಡುವುದಕ್ಕಾಗಿ ಜಿಲ್ಲೆಯಲ್ಲಿ 15 ಮಂದಿ ಪಿಎಫ್ಐ ಕಾರ್ಯಕರ್ತರು ತರಬೇತಿ ಪಡೆದಿದ್ದಾರೆ.
ಶನಿವಾರ ಆರು ಮಂದಿ ಅಂತ್ಯಕ್ರಿಯೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಸದ್ಯ ಅವರು ಮನೆ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಇದನ್ನೂ ಓದಿ...ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ಗೆ ಮೊದಲ ಸಾವು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.