ಚಾಮರಾಜನಗರ: ಬಲಿಪಾಡ್ಯಮಿ ಅಂಗವಾಗಿ ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ಗೋವಿಗೆ ಪೂಜೆಯನ್ನು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಸರ್ಕಾರದ ಆದೇಶದ ಮೇರೆಗೆ ಶುಕ್ರವಾರ ಸಂಜೆ ಗೋಪೂಜೆಯನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ರಾಮಚಂದ್ರ, ಅರ್ಚಕರಾದ, ಭಾರದ್ವಾಜ್, ಅನಿಲ್ ಕುಮಾರ್ ದೀಕ್ಷಿತ್, ಚಿಕ್ಕಣ್ಣ, ಚಾಮರಾಜೇಶ್ವರ ಪ್ರಧಾನ ಅರ್ಚಕರಾದ ಅಣ್ಣಾಜಿ, ಮಹೇಶ್, ಚಿಕ್ಕ ರಾಜು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಇತರರು ಇದ್ದರು.
ಚಾಮರಾಜನಗರ: ಸಮೀಪದ ಹರಳುಕೋಟೆಯ ಜನಾರ್ದನಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಸಂಜೆ ಗೋಪೂಜೆ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್ ಪುರಿ, ಮುಖಂಡ ವೆಂಕಟರಮಣ ಸ್ವಾಮಿ ಪಾಪು ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.