ADVERTISEMENT

ಜಿಂಕೆ ಕೊಂಬು, ನಕ್ಷತ್ರ ಆಮೆ ಸಾಗಣೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 1 ಮೇ 2023, 7:17 IST
Last Updated 1 ಮೇ 2023, 7:17 IST
ಜಿಂಕೆ ಕೊಂಬು
ಜಿಂಕೆ ಕೊಂಬು   

ಕೊಳ್ಳೇಗಾಲ: ಪ್ರತ್ಯೇಕ ಪ್ರಕರಣದಲ್ಲಿ ಜಿಂಕೆ ಕೊಂಬು, ನಕ್ಷತ್ರ ಆಮೆ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ತಾಲ್ಲೂಕಿನ ನರೀಪುರ‌ ಹಾಗೂ ಸರಗೂರು ಗ್ರಾಮದಲ್ಲಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ನರೀಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಜಿಂಕೆ ಕೊಂಬುನ್ನು ಸಾಗಣೆ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಕೂರ್ಗಳ್ಳಿ ಗ್ರಾಮದ ಮಂಜಾಚಾರಿ (42) ಎಂಬಾತನನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿ ಜಿಂಕೆ ಕೊಂಬು ವಶಕ್ಕೆ ಪಡೆದಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಸರಗೂರು ಗ್ರಾಮದ ಬಸ್ ನಿಲ್ದಾಣ ಸಮೀಪದಲ್ಲಿ ನಕ್ಷತ್ರ ಆಮೆ ಸಾಗಣೆ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಚಟ್ನಹಳ್ಳಿ ಗ್ರಾಮದ ಫೈರೋಜ್ ಖಾನ್ (36) ಎಂಬಾತನನ್ನು ಬಂಧಿಸಿ ಆಮೆ ರಕ್ಷಿಸಲಾಗಿದೆ.

ADVERTISEMENT

ಅರಣ್ಯ ಸಂಚಾರಿ ದಳದ ಪೊಲೀಸರು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಕ್ಷತ್ರ ಆಮೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.