ADVERTISEMENT

ಸಂತೇಮರಹಳ್ಳಿ: ಬಾಗಳಿಯಲ್ಲಿ ಡಿಸಿ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 7:56 IST
Last Updated 16 ಅಕ್ಟೋಬರ್ 2021, 7:56 IST
ಎತ್ತಿನಗಾಡಿಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರ ಮೆರವಣಿಗೆ. ಉಪವಿಭಾಗಾಧಿಕಾರಿ ಗಿರೀಶ್ ದಿಲೀಪ್ ಬದೋಲೆ ಜೊತೆಗೆ ಇದ್ದಾರೆ.
ಎತ್ತಿನಗಾಡಿಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರ ಮೆರವಣಿಗೆ. ಉಪವಿಭಾಗಾಧಿಕಾರಿ ಗಿರೀಶ್ ದಿಲೀಪ್ ಬದೋಲೆ ಜೊತೆಗೆ ಇದ್ದಾರೆ.   

ಚಾಮರಾಜನಗರ: ಜಿಲ್ಲಾಧಿಕರಿಗಳ ನಡೆ ಹಳ್ಳಿಗಳ‌ ಕಡೆ ಕಾರ್ಯಕ್ರಮದ ಭಾಗವಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಾಲ್ಲೂಕಿನ ಸಂತೇಮರಹಳ್ಳಿ ಹೋಬಳಿಯ ಬಾಗಳಿ ಗ್ರಾಮದಲ್ಲಿ ಶನಿವಾರ ವಾಸ್ತವ್ಯ ಹೂಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಗ್ರಾಮಕ್ಕೆ ಬಂದ ಜಿಲ್ಲಾಧಿಕಾರಿ ಅವರನ್ನು ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. ಅಲಂಕೃತ ಎತ್ತಿನ ಗಾಡಿಯಲ್ಲಿ ಜಿಲ್ಲಾಧಿಕಾರಿ ಅವರನ್ನು ಮೆರವಣಿಗೆ ಮಾಡಿ ವಾಸ್ತವ್ಯ ಹೂಡಲಿರುವ ಸ್ಥಳಕ್ಕೆ (ಸರ್ಕಾರಿ ಪ್ರೌಢ ಶಾಲೆ ಆವರಣ) ಕರೆದುಕೊಂಡು ಬಂದರು.

12 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಿದ್ದು, ಜನರ ಕುಂದು‌ಕೊರತೆಗಳನ್ನು ಜಿಲ್ಲಾಧಿಕಾರಿ ಅವರು ಆಲಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.