ADVERTISEMENT

ಡ್ರಗ್ಸ್‌ ವ್ಯವಹಾರ: ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತ–ಎಸ್‌.ಟಿ.ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 12:07 IST
Last Updated 11 ಸೆಪ್ಟೆಂಬರ್ 2020, 12:07 IST
ಸಚಿವ ಎಸ್‌.ಟಿ.ಸೋಮಶೇಖರ್
ಸಚಿವ ಎಸ್‌.ಟಿ.ಸೋಮಶೇಖರ್   

ಕೊಳ್ಳೇಗಾಲ: ಡ್ರಗ್ಸ್ ವ್ಯವಹಾರದಲ್ಲಿ ಯಾರೇ ಭಾಗಿಯಾಗಿದ್ದರೂಅವರನ್ನು ಬಿಡುವುದಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಹೇಳಿದರು.

ಮಹದೇಶ್ವರ ಬೆಟ್ಟಕ್ಕೆ ಹೋಗುವ ದಾರಿ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡ್ರಗ್ಸ್ ಪ್ರಕರಣದಲ್ಲಿ ಕೆಲವು ಶಾಸಕರು ಮತ್ತು ಅವರ ಮಕ್ಕಳ ಹೆಸರುಗಳೂ ಕೇಳಿ ಬರುತ್ತಿವೆ. ತನಿಖೆ ಬಹಳ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ಖಂಡಿತ. ಕಾನೂನು ಎಲ್ಲರಿಗೂ ಒಂದೇ. ಅದಕ್ಕೆ ಎಲ್ಲರೂ ತಲೆಬಾಗಲೇ ಬೇಕು’ ಎಂದರು.

ದಸರಾ ಉದ್ಘಾಟನೆ ನಾಳೆ ಘೋಷಣೆ: ಈ ವರ್ಷದ ಮೈಸೂರು ದಸರಾ ಉದ್ಘಾಟಕರ ಹೆಸರುಗಳನ್ನು ಶನಿವಾರ (ಸೆ.12) ಘೋಷಿಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸೋಮಶೇಖರ್‌ ಹೇಳಿದರು.

ADVERTISEMENT

‘ಕೋವಿಡ್-19 ವಿರುದ್ಧ ಹೋರಾಟ ನಡೆಸಿದ ಆಶಾ ಕಾರ್ಯಕರ್ತೆಯರು, ವೈದ್ಯರು, ಪೌರಕಾರ್ಮಿಕರು, ಪೊಲೀಸರು, ನರ್ಸ್‍ಗಳ ಮೂಲಕ ದಸರಾಗೆ ಚಾಲನೆ ನೀಡಲಾಗುವುದು ಎಂದು ಈಗಾಗಲೇ ಹೇಳಲಾಗಿದೆ. ಹೆಸರುಗಳನ್ನೂ ಪಟ್ಟಿ ಮಾಡಲಾಗುತ್ತಿದೆ. ಶನಿವಾರ ಸಭೆ ನಡೆಸಿ, ಇದರ ಬಗ್ಗೆ ಮಾಹಿತಿ ನೀಡುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಡಗೂರು ಎಚ್‌.ವಿಶ್ವನಾಥ್‌ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ವಿಶ್ವನಾಥ್‌ ಅವರಿಗೆ ಮಂತ್ರಿ ಸ್ಥಾನ ನೀಡುವ ಅಧಿಕಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈಯಲ್ಲಿದೆ ವಿನಾ ಇತರ ಸಚಿವರ ಕೈಯಲ್ಲಿ ಇಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.