ಚಾಮರಾಜನಗರ: ‘ಬಡವರ ಮೇಲೆ ಬರ ಹಾಕಿ ಯಾವ ಸರ್ಕಾರವೂ ಖುಷಿ ಪಡುವುದಿಲ್ಲ. ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಇಳಿಕೆ ಮಾಡುವುದೇ ಸರ್ಕಾರದ ಉದ್ದೇಶ. ಬೆಲೆ ಏರಿಕೆ ಮಾಡಿ ಬೊಕ್ಕಸ ತುಂಬಿಸುವ ಉದ್ದೇಶವೂ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಸೋಮವಾರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಲೆ ಕಡಿಮೆಯಾದಾಗ ಯಾರೂ ಮಾತನಾಡಿಲ್ಲ. ಸದ್ಯ ಬೆಲೆ ಏರಿಕೆಯಾಗುತ್ತಿದೆ. ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿರುವುದರಿಂದ ಇಂಧನದ ಬೆಲೆ ಮೇಲೆ ಪರಿಣಾಮ ಬೀರಿದೆ. ಬೆಲೆ ಇಳಿಕೆಯಾಗಲಿದೆ ಎಂದು ಪೆಟ್ರೋಲಿಯಂ ಸಚಿವರು ಹೇಳಿದ್ದಾರೆ’ ಎಂದರು.
ಸಚಿವರೊಂದಿಗೆ ಮಾತನಾಡುತ್ತೇನೆ: ಟಿವಿ, ಫ್ರಿಡ್ಜ್ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕಿದೆ. ಖುದ್ದಾಗಿ ನಾನೇ ಉಮೇಶ್ ಕತ್ತಿಯವರ ಬಳಿ ಮಾತನಾಡುತ್ತೇನೆ. ಟಿವಿ ಎಲ್ಲರ ಮನೆಲ್ಲಿದೆ. ಸಮಾಜದ ಕಟ್ಟ ಕಡೆಯ ಮಗು ಕೂಡ ಚಂದನವಾಹಿನಿಯಲ್ಲಿ ಸಂವೇದ ಕಾರ್ಯಕ್ರಮ ವೀಕ್ಷಿಸಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.