ಮಹದೇಶ್ವರ ಬೆಟ್ಟ (ಚಾಮರಾಜನಗರ): ಪೋಷಕರು ಶುಲ್ಕ ಪಾವತಿಸದಿದ್ದರೆ ಆನ್ಲೈನ್ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಎಚ್ಚರಿಸಿದ ಬೆನ್ನಲ್ಲೇ, ಈ ವಿಚಾರವಾಗಿ ಖಾಸಗಿ ಶಾಲೆಗಳ ಮುಖ್ಯಸ್ಥರ ಜೊತೆ ಶೀಘ್ರದಲ್ಲಿ ಸಭೆ ನಡೆಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಕಾರಣದಿಂದ ಕೆಲವು ಪೋಷಕರು ಶಾಲಾ ಶುಲ್ಕ ಪಾವತಿಸುವ ಸ್ಥಿತಿಯಲ್ಲಿ ಇಲ್ಲ. ಹಣ ಇದ್ದವರೂ ಕಟ್ಟುತ್ತಿಲ್ಲ. ಒಂದು ವೇಳೆ ಪೋಷಕರು ಶುಲ್ಕ ಪಾವತಿಸದಿದ್ದರೂ, ಮಕ್ಕಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕು ಎಂದು ಹೇಳಿದ್ದೆ. ಇದನ್ನು ಅವರು ಯಾವ ರೀತಿ ಅರ್ಥೈಸಿಕೊಂಡಿದ್ದಾರೋ ಗೊತ್ತಿಲ್ಲ. ಬೆಂಗಳೂರಿಗೆ ತೆರಳಿದ ನಂತರ ಪೋಷಕರಿಗೆ ಹಾಗೂ ಖಾಸಗಿ ಶಾಲೆಗಳಿಗೆ ತೊಂದರೆಯಾಗದಂತೆ ಹಿತಕರ ಕ್ರಮ ಕೈಗೊಳ್ಳುತ್ತೇನೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.