ADVERTISEMENT

ಕೊಳ್ಳೇಗಾಲ: ವಿದ್ಯುತ್ ಅವಘಡದಲ್ಲಿ ಕಾಫಿ ಅಂಗಡಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 7:19 IST
Last Updated 1 ಜನವರಿ 2026, 7:19 IST
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿರುವುದು   

ಕೊಳ್ಳೇಗಾಲ: ಇಲ್ಲಿನ ಬಿ.ಆರ್. ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿಯು ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿಗಾಹುತಿಯಾಗಿದೆ.

ಬೆಂಕಿ ಹತ್ತಿಕೊಂಡಿದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಟ್ಟರು. ಅಂಗಡಿಯು ಸಂಪೂರ್ಣ ಸುಟ್ಟ ಹೋಗಿದ್ದು, ಪಕ್ಕದಲ್ಲಿದ್ದ ಬೇಕರಿಯಲ್ಲಿ ಹೊಸ ವರ್ಷ ಆಚರಣೆಗೆ ತಯಾರು ಮಾಡಿದ್ದ ಕೇಕ್ ತಿಂಡಿ, ತಿನಿಸುಗಳು ಹಾಳಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.