ADVERTISEMENT

ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಗಂಡಾನೆ ಸಾವು

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2020, 6:33 IST
Last Updated 27 ಆಗಸ್ಟ್ 2020, 6:33 IST
ಆನೆಯ ಮೃತದೇಹ
ಆನೆಯ ಮೃತದೇಹ   

ಹನೂರು (ಚಾಮರಾಜನಗರ): ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಬೇಲಿಯನ್ನು ಸ್ಪರ್ಶಿಸಿ ಗಂಡಾನೆಯೊಂದು ಮೃತಪಟ್ಟಿದೆ.

ಪಿ.ಜಿ.ಪಾಳ್ಯದ ಸಿರಿಗೋಡು ಹತ್ತಿರದ ಕೃಷಿ ಜಮೀನೊಂದರಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ‌. ಮೃತ ಪಟ್ಟಿರುವ ಆನೆಯ ವಯಸ್ಸು 28-30 ವರ್ಷ ಇರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ.

ಬೆಳೆ ರಕ್ಷಣೆಗಾಗಿ ರೈತರೊಬ್ಬರು ತಮ್ಮ‌ ಜಮೀನಿಗೆ ತಂತಿಬೇಲಿ ಅಳವಡಿಸಿದ್ದರು. ಅದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ‌ ನೀಡಲಾಗಿತ್ತು ಎಂದು ಗೊತ್ತಾಗಿದೆ.

ADVERTISEMENT

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.