ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಜಾಗೇರಿ ಅರಣ್ಯ ಪ್ರದೇಶದಲ್ಲಿ 25 ರಿಂದ 30 ವರ್ಷದ ಗಂಡಾನೆಯೊಂದು ಸೋಮವಾರ ಅತಿಯಾಗಿ ಜೋಳ ಸೇವಿಸಿ ಉಸಿರುಗಟ್ಟಿ ಮೃತಪಟ್ಟಿದೆ
ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಜಾಗೇರಿ ಅರಣ್ಯ ಪ್ರದೇಶದಲ್ಲಿ 25 ರಿಂದ 30 ವರ್ಷದ ಗಂಡಾನೆಯೊಂದು ಸೋಮವಾರ ಅತಿಯಾಗಿ ಜೋಳ ಸೇವಿಸಿ ಉಸಿರುಗಟ್ಟಿ ಮೃತಪಟ್ಟಿದೆ.
ಜಾಗೇರಿ ಗ್ರಾಮದ ಸಿಆರ್ ನಗರದ ನಿವಾಸಿ ಶೇಷು ಎಂಬುವರ ಜಮೀನಿನಲ್ಲಿ ಆನೆ ಮೃತಪಟ್ಟಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಶವವನ್ನು ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಯಿತು. ಆನೆ ಸಾವು ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.