
ಪ್ರಜಾವಾಣಿ ವಾರ್ತೆ
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಶನಿವಾರ 57ಕ್ಕೆ ಇಳಿದಿದೆ. ಆರು ಹೊಸ ಪ್ರಕರಣಗಳು ದಾಖಲಾಗಿದ್ದರೆ, 11 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.
ಸೋಂಕಿತರ ಪೈಕಿ 39 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಸತತ ಎರಡನೇ ದಿನವೂ ಐಸಿಯುನಲ್ಲಿ ಯಾರೂ ಇಲ್ಲ.
ಜಿಲ್ಲೆಯಲ್ಲಿ ಇದುವರೆಗೆ 6,826 ಕೋವಿಡ್ ಪ್ರಕರಣಗಳು ವರದಿಯಾಗಿವೆ. 6,638 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.
ಶನಿವಾರ 1,145 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,139 ಮಂದಿಯ ವರದಿ ನೆಗೆಟಿವ್ ಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.