ADVERTISEMENT

ಟ್ರಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಜೋಳದ ಕಡ್ಡಿ ಭಸ್ಮ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 6:12 IST
Last Updated 13 ಏಪ್ರಿಲ್ 2021, 6:12 IST
ಟ್ರಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಜೋಳದ ಕಡ್ಡಿ ಬೆಂಕಿಯಲ್ಲಿ ಉರಿಯಿತು
ಟ್ರಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಜೋಳದ ಕಡ್ಡಿ ಬೆಂಕಿಯಲ್ಲಿ ಉರಿಯಿತು   

ಕೊಳ್ಳೇಗಾಲ: ತಾಲ್ಲೂಕಿನ ಪಾಳ್ಯ ಗ್ರಾಮದ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಜೋಳದ ಕಡ್ಡಿ ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿ ಜೋಳದ ಕಡ್ಡಿ ಸಂಪೂರ್ಣ ಭಸ್ಮವಾಗಿದೆ.

ಗ್ರಾಮದ ಚಾಲಕ ಮಸಣನಾಯಕ ಅವರು ಗುಂಡೇಗಾಲ ಗ್ರಾಮದ ರೈತ ರಿಂದ ₹ 10 ಸಾವಿರಕ್ಕೆ ಜೋಳದ ಕಡ್ಡಿ ಖರೀದಿಸಿ ಟ್ರಾಕ್ಟರ್‌ನಲ್ಲಿ ತುಂಬಿಕೊಂಡು ಪಾಳ್ಯಕ್ಕೆ ಬರುತ್ತಿದ್ದರು.

ಗ್ರಾಮದ ಬಸ್ ನಿಲ್ದಾಣದ ಬಳಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಜೋಳದ ಕಡ್ಡಿಗೆ ತಗುಲಿಬೆಂಕಿ ಹೊತ್ತಿ ಉರಿಯಲು ಆರಂಭವಾಯಿತು. ಇದನ್ನು ಗಮನಿಸಿದ ಚಾಲಕ ವೇಗವಾಗಿ ಚಾಲನೆ ಮಾಡಿ ಗ್ರಾಮದ ಹೊರಭಾಗದಲ್ಲಿ ಟ್ರಾಕ್ಟರ್ ನಿಲ್ಲಿಸಿ ಕಡ್ಡಿಯನ್ನು ನೆಲಕ್ಕುರುಳಿಸಿದನು ವಾಹನಕ್ಕೆ ಮತ್ತು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.