
ಗುಂಡ್ಲುಪೇಟೆ: ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿ ಏರ್ಪಡಿಸಲಾಗಿತ್ತು.
ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಘಟಕದ ಉಪಾಧ್ಯಕ್ಷ ಸಾಗರ್ ಅಗತಗೌಡನಹಳ್ಳಿ ಆಯೋಜಿಸಿದ್ದರು. 22 ತಂಡಗಳಲ್ಲಿ ಚಾಮರಾಜನಗರ ಪಿಡಬ್ಲ್ಯುಡಿ ತಂಡಕ್ಕೆ ಶ್ರೀ ಸಚ್ಚಿದಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ಬಸವರಾಜು ಪ್ರಥಮ ಬಹುಮಾನ ನೀಡಿದರು. ಚಿಕ್ಕತುಪ್ಪೂರು ತಂಡಕ್ಕೆ ಹೈ ಸ್ಟೇಷನ್ ಇಂಡಿಯನ್ ಪೆಟ್ರೋಲ್ ಬಂಕ್ ಮಾಲೀಕ ಪುನೀತ್ ಅಗತಗೌಡನಹಳ್ಳಿ ದ್ವಿತೀಯ ಬಹುಮಾನ ನೀಡಿದರು.
ಟ್ರಸ್ಟ್ ಸದಸ್ಯರು, ಆರೋಗ್ಯ ನಿರೀಕ್ಷಕ ಮಂಜುಕುಮಾರ್ ಅಗತಗೌಡನಹಳ್ಳಿ, ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್, ಜಗದೀಶ್, ಮಾದಪ್ಪ, ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗರಗನಹಳ್ಳಿ ಮಹೇಂದ್ರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.