ADVERTISEMENT

ನಾಲ್ವರಿಗೆ ಸೋಂಕು, ಆರು ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 2:47 IST
Last Updated 18 ಸೆಪ್ಟೆಂಬರ್ 2021, 2:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ನಾಲ್ಕು ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಆರು ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ 44ಕ್ಕೆ ಇಳಿದಿದೆ. ಇಬ್ಬರು ಐಸಿಯುನಲ್ಲಿದ್ದು, 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,425 ಮಂದಿಗೆ ಸೋಂಕು ತಗುಲಿದೆ. 31,843 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಶುಕ್ರವಾರ 2,023 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,019 ಮಂದಿ‌ಯ ವರದಿ ನೆಗೆಟಿವ್‌ ಬಂದು, ನಾಲ್ವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.