ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಆರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ಸಂಭವಿಸಿದೆ. ಹಕೀಂ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದೆ ಎನ್ನಲಾಗಿದೆ.
ಆರು ಟಿಪ್ಪರ್ ಗಳಿಗೆ ಹಾನಿಯಾಗಿದೆ. ಗಣಿ ಕಾರ್ಮಿಕರು ಹಾಗೂ ಟಿಪ್ಪರ್ ಚಾಲಕರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ಆರಂಭಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.