ಹನೂರು (ಚಾಮರಾಜನಗರ): ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಮನೆಯಲ್ಲಿ ಬುಧವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಸಕಾಲದಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಾಲೆಯಲ್ಲಿ ಎಂದಿನಂತೆ ಬುಧವಾರ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಅಡುಗೆ ಸಿಬ್ಬಂದಿ ಸ್ಟೌ ಹಚ್ಚಿದ್ದಾರೆ. ಇದ್ದಕ್ಕಿದ್ದಂತೆ ಸಿಲಿಂಡರ್ ಪೈಪ್ ನಲ್ಲಿ ಬೆಂಕಿ ಕಾಣಿಸಿಕೊಂಡು ಉರಿಯತೊಡಗಿದೆ. ಇದನ್ನು ಗಮನಿಸಿದ ಸಿಬ್ಬಂದಿ ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ತಕ್ಷಣವೇ ಗ್ರಾಮಸ್ಥರು ಬೆಂಕಿ ನಂದಿಸಿದರು.
ಯಾವುದೇ ಅನಾಹುತ ಸಂಭವಿಸಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.