ಚಾಮರಾಜನಗರ: ‘ಜಿಲ್ಲೆ ಹಾಗೂ ಹಿಂದುಳಿದ ವರ್ಗಗಳ ಕೋಟಾದಡಿಯಲ್ಲಿ ನನಗೆ ಮಂತ್ರಿ ಸ್ಥಾನ ಖಚಿತವಾಗಿ ಸಿಗಲಿದೆ’ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಾನು ಸತತ ನಾಲ್ಕನೇ ಬಾರಿ ಗೆದ್ದಿದ್ದೇನೆ. ಹಿರಿಯ ಶಾಸಕನಾಗಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಲಾಬಿ ಮಾಡುವ ವ್ಯಕ್ತಿ ನಾನಲ್ಲ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಕೂಡ ನನಗೆ ಮಂತ್ರಿ ಸ್ಥಾನವನ್ನು ಕೊಡಿಸುವಲ್ಲಿ ಉತ್ಸುಕರಾಗಿದ್ದಾರೆ’ ಎಂದರು.
‘ಜಿಲ್ಲೆಯ ಅಭಿವೃದ್ದಿಗೂ ಸಿದ್ದರಾಮಯ್ಯ ವಿಶೇಷ ಅದ್ಯತೆ ನೀಡಲಿದ್ದಾರೆ. ಮೂವರು ಶಾಸಕರನ್ನು ಕೊಟ್ಟಿರುವ ಜಿಲ್ಲೆಯ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.