ADVERTISEMENT

ಕೊಳ್ಳೇಗಾಲ: ಪತ್ರಕರ್ತನ ಮೇಲೆ ಹಲ್ಲೆ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 6:40 IST
Last Updated 7 ಸೆಪ್ಟೆಂಬರ್ 2025, 6:40 IST
ಆರೋಪಿ ರವಿ ನಾಯಕ
ಆರೋಪಿ ರವಿ ನಾಯಕ   

ಕೊಳ್ಳೇಗಾಲ: ಪತ್ರಕರ್ತ ಚಿಕ್ಕಮಾಳಿಗೆ ಎಂಬುವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಾಲ್ಲೂಕಿನ ಪಾಳ್ಯ ಗ್ರಾಮದ ರವಿನಾಯಕ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ದೇವಾಂಗಪೇಟೆಯ ಮಲ್ಲಿಗೆ ಇಡ್ಲಿ ಹೋಟೆಲ್‌ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದ್ದು ರವಿ ನಾಯಕ ಅವರ ಕೈಗೆ ಆರೋಪಿ ಚಿಕ್ಕಮಾಳಿಗೆ ಹಲ್ಲೆ ಮಾಡಿದ್ದಾನೆ. ಪರಿಣಾಮ ಕೈ ಮುರಿತಕ್ಕೆ ಒಳಗಾದ ಚಿಕ್ಕಮಾಳಿಗೆ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದು ಕಾಮಗಾರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ರವಿನಾಯಕನನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.