ಬಂಧನ
(ಪ್ರಾತಿನಿಧಿಕ ಚಿತ್ರ)
ಕೊಳ್ಳೇಗಾಲ: ತಾಲ್ಲೂಕಿನ ಇಕ್ಕಡಹಳ್ಳಿ ಗ್ರಾಮದ ಹೊರವಲಯದಲ್ಲಿ ಜೂಜಾಡುತ್ತಿದ್ದ ಗ್ರಾಮದ ಪುಟ್ಟರಾಜು, ಕೆಂಪಯ್ಯ ಹಾಗೂ ಮತ್ತಿಪುರ ಗ್ರಾಮದ ಮಹದೇವ ಎಂಬುವರನ್ನು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ 8 ಮಂದಿ ಜೂಜಾಟದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಸುಪ್ರೀತ್ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ಮಾಡಲು ಮುಂದಾದಾಗ 5 ಮಂದಿ ಪೊಲೀಸರನ್ನು ನೋಡಿದ ಕೂಡಲೇ ಓಡಿ ಹೋದರು. ಇನ್ನು ಮೂರು ಮಂದಿಯನ್ನು ಬಂಧಿಸಿದ್ದಾರೆ. ಪಡಕ್ಕಿಟ್ಟಿದ್ದ ₹4,760 ನಗದು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳನ್ನು ಠಾಣಾ ಜಾಮಿನು ಮೇಲೆ ಬಿಡುಗಡೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.