ಕೊಳ್ಳೇಗಾಲ: ತಾಲ್ಲೂಕಿನ ಚೆಲುವನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಚಾಮರಾಜನಗರದ ನಿವಾಸಿಗಳಾದ ಜುಬೇರ್, ಇರ್ಫಾನ್ ಹಾಗೂ ವಾಸೀಂ ಉಲ್ಲಾ ಎಂಬವರನ್ನು ಗ್ರಾಮಾಂತರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಆರೋಪಿಗಳಿಂದ 248 ಕೆ.ಜಿ. ಪಡಿತರ ಅಕ್ಕಿ ಹಾಗೂ ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಗ್ರಾಮೀಣ ಪ್ರದೇಶದಿಂದ ಪಡಿತರ ಅಕ್ಕಿ ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುವ ಸಲುವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ಕಡೆಗೆ ಕೊಂಡೊಯ್ಯುತ್ತಿದ್ದರು ಪಿಎಸ್ಐ ಸುಪ್ರೀತ್ ಹಾಗೂ ಆಹಾರ ಇಲಾಖೆಯ ಶಿರಸ್ತೆದಾರ್ ವಿಶ್ವನಾಥ್, ಪ್ರಸಾದ್ ಜಂಟಿ ಕಾರ್ಯ ನಡೆಸಿದ್ದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.