ADVERTISEMENT

ರಾಜ್ಯಪಾಲರು ರಾಜಕೀಯ ಏಜೆಂಟ್‌ : ಕೃಷ್ಣ ಭೈರೇಗೌಡ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 14:24 IST
Last Updated 2 ಆಗಸ್ಟ್ 2024, 14:24 IST
 ಕೃಷ್ಣ ಭೈರೇಗೌಡ
ಕೃಷ್ಣ ಭೈರೇಗೌಡ   

ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ‘ರಾಜ್ಯಪಾಲ ಥಾವರಚಂದ್ ಗೆಹಲೋತ್ ರಾಜಕೀಯ ಏಜೆಂಟ್ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು.

ತಾಲ್ಲೂಕಿನ ದಾಸನಪುರದಲ್ಲಿ ಶುಕ್ರವಾರ ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಮಾತನಾಡಿ, ‘ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿಲ್ಲದಿದ್ದರೂ ನೋಟಿಸ್ ನೀಡಿರುವ ರಾಜ್ಯಪಾಲರು ಏಕ ಪಕ್ಷೀಯವಾಗಿ ಕರ್ನಾಟಕ ಹಾಗೂ ಕನ್ನಡಿಗರ ವಿರೋಧಿಯಾಗಿ ವರ್ತಿಸುತ್ತಿದ್ದಾರೆ’ ಎಂದರು.

‘ಮೇಕೆದಾಟು, ಕಳಸಾ ಬಂಡೂರಿ ಸೇರಿದಂತೆ ನೀರಾವರಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮರೆಮಾಚಿ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ. ಲಿಂಗಾಯತ ನಾಯಕರನ್ನು ಮುಗಿಸಿರುವ ಪ್ರಹ್ಲಾದ್ ಜೋಷಿಯವರು ಈಗ ಕುಮಾರಸ್ವಾಮಿಯವರನ್ನು ಮುಗಿಸಲು ಹೊರಟಿದ್ದಾರೆ. ಜೆಡಿಎಸ್‌ ಕಾರ್ಯಕರ್ತರನ್ನು ಬಿಜೆಪಿಗೆ ಸೆಳೆಯುವುದು ಹಾಗೂ ಕುಮಾರಸ್ವಾಮಿ ಶಕ್ತಿ ಕುಂದಿಸುವ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವುದು ಉದ್ದೇಶ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.