ADVERTISEMENT

ಚಾಮರಾಜನಗರ: ಹಳ್ಳಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್, 22 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2022, 7:12 IST
Last Updated 26 ಅಕ್ಟೋಬರ್ 2022, 7:12 IST
ತಾಳಬೆಟ್ಟದ ಬಳಿ ಹಳ್ಳಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌
ತಾಳಬೆಟ್ಟದ ಬಳಿ ಹಳ್ಳಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌   

ಹನೂರು (ಚಾಮರಾಜನಗರ): ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಮುಗಿಸಿಕೊಂಡು ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ತಾಳಬೆಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ್ದು, 22 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬಸ್ಸಿನಲ್ಲಿ 51 ಪ್ರಯಾಣಿಕರಿದ್ದರು. ಈ ಪೈಕಿ 22 ಜನರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಗಿದೆ.

'ತೀವ್ರ ತಿರುವಿನಿಂದಾಗಿ ಚಾಲಕನ ನಿಯಂತ್ರಣಕ್ಕೆ ಬರದೆ ಹಳ್ಳಕ್ಕೆ ನುಗ್ಗಿದೆ. ಕೆಲವು ಜನರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ' ಎಂದು ಕೊಳ್ಳೇಗಾಲ ಕೆಎಸ್ಆರ್ ಟಿಸಿ ಡಿಪೊ ಮ್ಯಾನೇಜರ್ ಸುಬ್ರಹ್ಮಣ್ಯ 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.