ADVERTISEMENT

ಚಾಮರಾಜನಗರ: ಪಡಿತರ ಇ–ಕೆವೈಸಿ: 1.26 ಲಕ್ಷ ಮಂದಿ ಬಾಕಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2021, 5:28 IST
Last Updated 5 ನವೆಂಬರ್ 2021, 5:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಪಡಿತರ ಚೀಟಿ ಇ–ಕೆವೈಸಿ ಮಾಡಿಸಿಕೊಳ್ಳಲು ಇನ್ನೂ 1,26,821 ಮಂದಿ ಬಾಕಿ ಇದ್ದು,ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಇ–ಕೆವೈಸಿ ಮಾಡಿಸಿಕೊಳ್ಳಲು ಇದೇ 10ರವರೆಗೆ ಕೊನೆ ಅವಕಾಶ ನೀಡಿದೆ.

ಜಿಲ್ಲೆಯಲ್ಲಿ 35,977 ಎ.ಎ.ವೈ (ಅಂತ್ಯೊದಯ) ಪಡಿತರ ಚೀಟಿಗಳಿದ್ದು, 1,37,510 ಸದಸ್ಯರಿದ್ದಾರೆ. ಈ ಪೈಕಿ 1,14,196 ಸದಸ್ಯರ ಇ-ಕೆವೈಸಿ ಆಗಿದ್ದು, ಉಳಿದ 23,316 ಸದಸ್ಯರ ಇ-ಕೆವೈಸಿ ಆಗಬೇಕಿದೆ.

ಜಿಲ್ಲೆಯಲ್ಲಿ ಇದುವರೆಗೆ2,53,135 ಬಿಪಿಎಲ್‌ ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು, 7,20,355 ಫಲಾನುಭವಿಗಳಿದ್ದಾರೆ. ಈ ಪೈಕಿ 6,16,850 ಸದಸ್ಯರ ಇ-ಕೆವೈಸಿಯಾಗಿದ್ದು, ಇನ್ನೂ 1,03,505 ಸದಸ್ಯರ ದೃಢೀಕರಣ ಬಾಕಿ ಇದೆ.

ADVERTISEMENT

ಪ್ರತಿ ದಿನ ಬೆಳಿಗ್ಗೆ 8ರಿಂದ ರಾತ್ರಿ 8ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಆಗಿಲ್ಲದವರ ಮಾಹಿತಿ ಪಟ್ಟಿಯನ್ನು ಎಲ್ಲ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರದರ್ಶಿಸಲಾಗಿದೆ.

ಪಡಿತರ ಚೀಟಿ (ರೇಷನ್ ಕಾರ್ಡ್), ಆಧಾರ್‌ ಸಂಖ್ಯೆ, ದೂರವಾಣಿ ಸಂಖ್ಯೆ, ಅಡುಗೆ ಅನಿಲ ಸಂಪರ್ಕ ಹೊಂದಿರುವ ಬಗ್ಗೆ ಹಾಗೂ ಕುಟುಂಬದವರ ಸಂಬಂಧ ಮಾಹಿತಿ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಮಾಹಿತಿ ನೀಡಬೇಕು.

‘ಇ-ಕೆವೈಸಿ ಮಾಡಿಸದೇ ಇರುವ ಫಲಾನುಭವಿಗಳು ಇದೇ 10ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇದು ಅಂತಿಮ ಅವಕಾಶವಾಗಿದೆ’ ಎಂದುಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಯೋಗಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.