ಚಾಮರಾಜನಗರ: ಮೈಸೂರಿನಲ್ಲಿ ಶನಿವಾರ ನಿಧನರಾದ ಕೃಷಿ ವಿಜ್ಞಾನಿ, ಭತ್ತ ಸಂಶೋಧಕ ಪ್ರೊ.ಎಂ.ಮಹದೇವಪ್ಪ ಅವರ ಅಂತ್ಯಕ್ರಿಯೆ ಭಾನುವಾರ ಅವರ ಹುಟ್ಟೂರು ತಾಲ್ಲೂಕಿನ ಮಾದಾಪುರದಲ್ಲಿರುವ ಜಮೀನಿನಲ್ಲಿ ಭಾನುವಾರ ಮಧ್ಯಾಹ್ನದ ನಂತರ ನಡೆಯಿತು.
ಪಾರ್ಥೀವ ಶರೀರವನ್ನು ಬೆಳಿಗ್ಗೆ ಮೈಸೂರಿನಿಂದ ತರಲಾಯಿತು. ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಆ ಬಳಿಕ ವೀರಶೈವ ಲಿಂಗಾಯತ ವಿಧಿ ವಿಧಾನಗಳಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮರಿಸ್ವಾಮಿ, ಜಿಲ್ಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ನಾಗಶ್ರೀ, ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮೂಡ್ಲುಪುರ ನಂದೀಶ್, ಬಿಜೆಪಿ ಮುಖಂಡ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ, ಚಾಮುಲ್ ನಿರ್ದೇಶಕ ರವಿಶಂಕರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಇತರರು ಮಹದೇವಪ್ಪ ಅವರ ಅಂತಿಮ ದರ್ಶನ ಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.