ADVERTISEMENT

ಚಾಮರಾಜನಗರ | ಲೋಕ ಅದಾಲತ್‌: 8,441 ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 16:11 IST
Last Updated 25 ಜೂನ್ 2022, 16:11 IST
ಚಾಮರಾಜನಗರದ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಬಿ.ಎಸ್‌.ಭಾರತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ ಅವರ ಸಮ್ಮುಖದಲ್ಲಿ ಲೋಕ ಅದಾಲತ್‌ ನಡೆಯಿತು
ಚಾಮರಾಜನಗರದ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಬಿ.ಎಸ್‌.ಭಾರತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ ಅವರ ಸಮ್ಮುಖದಲ್ಲಿ ಲೋಕ ಅದಾಲತ್‌ ನಡೆಯಿತು   

ಚಾಮರಾಜನಗರ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಶನಿವಾರ ಲೋಕ ಅದಾಲತ್‌ ನಡೆದಿದ್ದು, ದಾಖಲೆಯ 8,441 ಪ್ರಕರಣಗಳು ಇತ್ಯರ್ಥವಾಗಿವೆ.

ನ್ಯಾಯಾಲಯದಲ್ಲಿ ಬಾಕಿ ಇದ್ದ 2,045 ಪ್ರಕರಣಗಳನ್ನು ಎರಡೂ ಪಕ್ಷಗಾರರ ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ಇದರ ಜೊತೆಗೆ 6,396 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.

ನಗರದ ಜಿಲ್ಲಾ ನ್ಯಾಯಾಲಯ, ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರು ನ್ಯಾಯಾಲಯಗಳಲ್ಲೂ ಲೋಕ ಅದಾಲತ್‌ ನಡೆದಿದೆ.

ADVERTISEMENT

ಹೆಚ್ಚಿನ ಪ್ರಕರಣಗಳು ವಿಲೇವಾರಿಯಾಗಿರುವುದರಿಂದ ಜನಸಾಮಾನ್ಯರಿಗೆ ಅನುಕೂಲವಾಗಿದ್ದು, ನ್ಯಾಯಾಲಯದ ಮೇಲಿನ ಪ್ರಕರಣಗಳ ಹೊರೆ ತಗ್ಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಶ್ರೀಧರ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.