ADVERTISEMENT

ಮಹದೇಶ್ವರ ಬೆಟ್ಟದಲ್ಲಿ ಸ್ಥಳೀಯರಿಗೆ ಉಚಿತ ಪ್ರಸಾದ ವಿತರಣೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2020, 1:02 IST
Last Updated 26 ಮಾರ್ಚ್ 2020, 1:02 IST

ಚಾಮರಾಜನಗರ: ಪ್ರಸಿದ್ಧ ತೀರ್ಥ ಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗಾಗಿ ಸಿದ್ಧಪಡಿಸಲಾಗಿದ್ದ ಲಾಡು ಪ್ರಸಾದವನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಸ್ಥಳೀಯರಿಗೆ ಹಾಗೂ ಸುತ್ತ ಮುತ್ತಲ ಗ್ರಾಮಸ್ಥರಿಗೆ ವಿತರಿಸುತ್ತಿದೆ.

ಯುಗಾದಿ ಜಾತ್ರೆಗಾಗಿ 72 ಸಾವಿರ ಲಾಡುಗಳನ್ನು ಸಿದ್ಧಪಡಿಸಲಾಗಿತ್ತು. ಕೊರೊನಾ ವೈರಸ್ ಭೀತಿಯಿಂದ ಜಾತ್ರೆ ರದ್ದಾಗಿರುವುದರಿಂದ ತಯಾರಿಸಿರುವ ಲಾಡುಗಳನ್ನು ಸ್ಥಳೀಯ ಭಕ್ತರಿಗೆ ವಿತರಿಸಲು ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮ್ಮತಿಸಿದ್ದರು.
ಅದರಂತೆ ದೇವಾಲಯಗಳ 550 ಸಿಬ್ಬಂದಿಗೆ ತಲಾ 10 ಲಾಡುಗಳು ಹಾಗೂ ಸ್ಥಳೀಯರಿಗೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರಿಗೆ ಒಂದೊಂದು ಲಾಡನ್ನು ವಿತರಿಸಲಾಗುತ್ತಿದೆ ಎಂದು ಮಲೆ‌ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವ ಸ್ವಾಮಿ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT