ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದ ಪೊನ್ನಾಚಿ ವಲಯದ ಮರೂರು ಬೀಟ್ ನ ಕೆಂದಾರೆ ಹಳ್ಳದಲ್ಲಿ 45 ವರ್ಷದ ಗಂಡಾನೆಯ ಅವಶೇಷಗಳು ಪತ್ತೆಯಾಗಿವೆ.
ಆನೆ 25 ದಿನಗಳ ಹಿಂದೆ ಸಹಜವಾಗಿ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ ಇದೇ ವನ್ಯಧಾಮದಲ್ಲಿ ಒಂದು ಹೆಣ್ಣಾನೆ ಮತ್ತು ಗಂಡಾನೆ ಮೃತಪಟ್ಟಿದ್ದವು.
ಈ ಪ್ರಕರಣದಿಂದಾಗಿ ಕಾವೇರಿ ಮತ್ತು ಮಲೆಮಹದೇಶ್ವರ ವನ್ಯಧಾಮದಲ್ಲಿ ತಿಂಗಳ ಅವಧಿಯಲ್ಲಿ ಏಳು ಆನೆಗಳು ಮೃತಪಟ್ಟಂತೆ ಆಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.