ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ, ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಗುರುವಾರದಿಂದ (ಅ.12) ಮಹಾಲಯ ಅಮಾವಾಸ್ಯೆ ಜಾತ್ರೆ ಆರಂಭವಾಗಲಿದೆ.
13ರಂದು ಚದುರ್ದಶಿ ಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸವಾದಿಗಳು ಹಾಗೂ 14ರಂದು ಮಹಾಲಯ ಅಮಾವಾಸ್ಯೆ ವಿಶೇಷ ಉತ್ಸವಾದಿಗಳು ಜರುಗಲಿವೆ.
15ರಂದು ದಸರಾ ಜಾತ್ರಾ ಮಹೋತ್ಸವದ ಶರನ್ನವರಾತ್ರಿ ಉಯ್ಯಾಲೋತ್ಸವ ಪ್ರಾರಂಭವಾಗಲಿದೆ. 23ರಂದು ಮಹಾನವಮಿ, ಆಯುಧಪೂಜೆ ಹಾಗೂ 24ರಂದು ವಿಜಯದಶಮಿ, ಕುದುರೆ ವಾಹನೋತ್ಸವ ನಡೆಯಲಿದೆ.
ದೀಪಾವಳಿ ಜಾತ್ರೆ: ನವೆಂಬರ್ 10ರಂದು ದೀಪಾವಳಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ಪ್ರಾರಂಭವಾಗಲಿದೆ. 11ರಂದು ಶ್ರೀ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ಮತ್ತು ಉತ್ಸವಾದಿಗಳು, 12ರಂದು ನರಕ ಚತುರ್ದಶಿ ವಿಶೇಷ ಉತ್ಸವಾದಿಗಳು, 13ರಂದು ಅಮಾವಾಸ್ಯೆ, ಹಾಲರುವೆ ಉತ್ಸವ ಹಾಗೂ 14ರಂದು ದೀಪಾವಳಿ ಮಹಾರಥೋತ್ಸವವು ಬೆಳಿಗ್ಗೆ 8.50 ರಿಂದ 9.10 ಗಂಟೆಯವರೆಗೆ ಜರುಗಲಿದೆ.
ನವೆಂಬರ್ 20ರಂದು ಮೊದಲನೇ ಕಾರ್ತಿಕ ಸೋಮವಾರ, 27ರಂದು ಎರಡನೇ ಕಾರ್ತಿಕ ಸೋಮವಾರ, ಡಿಸೆಂಬರ್ 4ರಂದು ಮೂರನೇ ಕಾರ್ತಿಕ ಸೋಮವಾರದಂದು ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ. 11ರಂದು ನಾಲ್ಕನೇ ಕಾರ್ತಿಕ ಸೋಮವಾರದಂದು ಶ್ರೀ ಸ್ವಾಮಿಗೆ ಎಣ್ಣೆಮಜ್ಜನ ಸೇವೆ, ರಾತ್ರಿ ಶ್ರೀ ಮಹದೇಶ್ವರ ಜ್ಯೋತಿ ದರ್ಶನ ಹಾಗೂ 12ರಂದು ಕಾರ್ತಿಕ ಅಮಾವಾಸ್ಯೆ ವಿಶೇಷ ಸೇವೆ ಉತ್ಸವಗಳು ನಡೆಯಲಿವೆ ಎಂದು ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.