ಚಾಮರಾಜನಗರ: 'ಕೆಲಸಗಾರನ ಸಾಮರ್ಥ್ಯ ಗುರುತಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನ್ನ ಮನೆಗೆ ಭೇಟಿ ಕೊಟ್ಟಿದ್ದಾರೆ. ಇದು ಸೌಹಾರ್ದಯುತ ಭೇಟಿಯಷ್ಟೇ. ಇದರಿಂದ ಯಾರಿಗೂ ಅನ್ಯಾಯವಾಗುವುದಿಲ್ಲ. ಅನನುಕೂಲವೂ ಆಗುವುದಿಲ್ಲ' ಎಂದು ವಸತಿ, ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಶನಿವಾರ ಹೇಳಿದರು.
ಅಮಿತ್ ಶಾ ಇತ್ತೀಚೆಗೆ ತಮ್ಮ ಮನೆಗೆ ಭೇಟಿ ನೀಡಿದ ಬಗ್ಗೆ ತಾಲ್ಲೂಕಿನ ಕಾಗಲವಾಡಿಮೋಳೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, 'ಪಕ್ಷದ ಸಿದ್ಧಾಂತದ ಅಡಿ ನಾಲ್ಕು ಗೋಡೆಗಳ ಮಧ್ಯೆ ಕೆಲಸ ಮಾಡುತ್ತಿದ್ದೆ. ಅದು ಹೊರ ಜಗತ್ತಿಗೆ ಗೊತ್ತಾಯಿತು. ಕೇಂದ್ರದ ಗೃಹ ಸಚಿವರೊಬ್ಬರು ರಾಜ್ಯದ ಮುಖಂಡನ ಮನೆಗೆ ಮಾಹಿತಿಯಿಲ್ಲದೇ ಬರುತ್ತಾರೆಯೇ? 2023 ಕ್ಕೂ ಡಬಲ್ ಎಂಜಿನ್ ಸರ್ಕಾರ ಬರಬೇಕು ಎನ್ನುವುದು ಅವರ ಉದ್ದೇಶ' ಎಂದರು.
'ಯಾವ್ಯಾವ ಸಮಯಕ್ಕೆ ಏನು ಆಗಬೇಕು ಅದೆಲ್ಲಾ ಆಗುತ್ತದೆ. ಅಮಿತ್ ಶಾ ಇಷ್ಟೊಂದು ಹೃದಯ ಸಂಪನ್ನರು ಅಂತಾ ಗೊತ್ತಿರಲಿಲ್ಲ. ಅವರ ಭೇಟಿಯಿಂದ ರಾಜ್ಯಕ್ಕೆ ಅನುಕೂಲವಾಗುತ್ತದೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.