ಚಾಮರಾಜನಗರ: ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಶಾಸ್ತ್ರ ಹೇಳುತ್ತಾರಾ? ಬಿಜೆಪಿ ಮುಖ್ಯಮಂತ್ರಿಯವರನ್ನು ಅವರು ಆಯ್ಕೆ ಮಾಡುತ್ತಾರಾ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಪ್ರಶ್ನಿಸಿದರು.
'ಬಿಜೆಪಿ ಸರ್ಕಾರ ಬಂದರೆ ಬ್ರಾಹ್ಮಣರನ್ನು ಮುಖ್ಯಮಂತ್ರಿ ಮಾಡುತ್ತಾರೆ' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯವರು ಬಿಜೆಪಿಯ ಹೈಕಮಾಂಡಾ? ನಮ್ಮ ಪಕ್ಷದ ಅಧ್ಯಕ್ಷರಾ' ಎಂದು ಕೇಳಿದರು.
ನಮ್ಮ ಹೈಕಮಾಂಡ್ ಬಲಿಷ್ಠವಾಗಿದೆ. ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.