
ಪ್ರಜಾವಾಣಿ ವಾರ್ತೆ
ಸಂತೇಮರಹಳ್ಳಿ: ಸಮೀಪದ ಹೆಗ್ಗವಾಡಿಪುರ ಗ್ರಾಮದಲ್ಲಿ ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಬುಧವಾರ ಸಾರ್ವಜನಿಕರಿಗೆ ಪಾನಕ, ಮಜ್ಜಿಗೆ ಹಾಗೂ ಕೊಸಂಬರಿಯನ್ನು ವಿತರಿಸಲಾಯಿತು.
ಪ್ರತಿ ವರ್ಷ ನಡೆಯುವ ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ಪಾನಕ, ಮಜ್ಜಿಗೆ ಹಾಗೂ ಕೊಸಂಬರಿಯನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ನೀಲಮ್ಮ, ಮಹದೇವಮ್ಮ, ರಾಜಮ್ಮ, ಸಿದ್ದರಾಜು, ಮಹೇಶ್, ಪದ್ಮಾ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.