ADVERTISEMENT

ಚಾಮರಾಜನಗರ: ಕುಸಿದು ಬಿದ್ದು ನಗರಸಭಾ ಸದಸ್ಯ ಸಾವು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 9:55 IST
Last Updated 1 ಸೆಪ್ಟೆಂಬರ್ 2021, 9:55 IST
ಸಮೀವುಲ್ಲಾ
ಸಮೀವುಲ್ಲಾ   

ಚಾಮರಾಜನಗರ: ಪ್ರಕರಣವೊಂದರ ವಿಚಾರಣೆಗಾಗಿ ಬುಧವಾರ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ‌ ನಗರಸಭಾ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಗಾಳಿಪುರ ಬಡಾವಣೆಯ ಅಹಮದ್ ಮೊಹಲ್ಲಾ ನಿವಾಸಿ, ನಗರಸಭೆಯ 6ನೇ ವಾರ್ಡ್ ಸದಸ್ಯ ಸಮೀವುಲ್ಲಾ ಖಾನ್ (45) ಮೃತಪಟ್ಟವರು.

ಎಸ್ ಡಿಪಿಐ ಜಿಲ್ಲಾ ಘಟಕದ ಉಪಾಧ್ಯಕ್ಷರೂ ಆಗಿರುವ ಅವರಿಗೆ ಪತ್ನಿ, ಮಗ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ADVERTISEMENT

ಮೂರು ವರ್ಷಗಳ ಹಿಂದೆ, ಬಾಬರಿ‌ ಮಸೀದಿ ಧ್ವಂಸ ಪ್ರಕರಣದ ವರ್ಷಾಚರಣೆ ದಿನ (ಡಿ.6) ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿರುವ ಸಂಬಂಧ ಸಮೀವುಲ್ಲಾ ಸೇರಿದಂತೆ 106 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆಗಾಗಿ ಸಮೀವುಲ್ಲಾ ಖಾನ್ ಹಾಗೂ ಇತರರು ನ್ಯಾಯಾಲಯಕ್ಕೆ ಬಂದಿದ್ದರು.

'ಆವರಣದಲ್ಲಿ ವಕೀಲರೊಂದಿಗೆ ಮಾತನಾಡುತ್ತಿದ್ದಂತೆಯೇ ಸಮೀವುಲ್ಲಾ ಕುಸಿದು ಬಿದ್ದರು. ತಕ್ಷಣವೇ ಅವರನ್ನು ನಗರದ ಬಸವರಾಜೇಂದ್ರ ಆಸ್ಪತ್ರೆಗೆ ದಾಖಲಾಯಿಸಲಾಯಿತು. ಅಷ್ಟು ಹೊತ್ತಿಗಾಗಲೇ ಅವರು ಕೊನೆಯುಸಿರೆಳೆದಿದ್ದರು' ಎಂದು ಎಸ್‌ಡಿಪಿಐ ಮುಖಂಡರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.