ಚಾಮರಾಜನರ: ನವಜಾತ ಗಂಡು ಶಿಶುವನ್ನು ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಬಿಟ್ಟು ಹೋದ ಪ್ರಕರಣ ನಗರದಲ್ಲಿ ಶುಕ್ರವಾರ ನಡೆದಿದೆ.
ನಗರದ ರಂಗನಾಥ ಕಲ್ಯಾಣ ಮಂಟಪದ ಹಿಂಭಾಗದಲ್ಲಿ ಕೆಲವು ಗಂಟೆಗಳ ಮೊದಲೇ ಜನಿಸಿದ್ದ ಗಂಡು ಶಿಶುವನ್ನು ಬಿಟ್ಟು ಹೋಗಿದ್ದಾರೆ. ಮಗುವಿನ ಅಳು ಕೇಳಿ ಸ್ಥಳೀಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕರೆ ಮಾಡಿ ತಿಳಿಸಿದ್ದಾರೆ.
‘12 ಗಂಟೆಯ ಹೊತ್ತಿಗೆ ನಮಗೆ ಮಾಹಿತಿ ಬಂತು. ತಕ್ಷಣ ಸ್ಥಳಕ್ಕೆ ಹೋಗಿ ಶಿಶುವನ್ನು ರಕ್ಷಿಸಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದೇವೆ. ಒಂದರಿಂದ ಎರಡು ಗಂಟೆ ಮೊದಲು ಮಗು ಜನಿಸಿರಬಹುದು. ಸಹಜ ಹೆರಿಗೆಯಾಗಿದೆ. ಗಂಡು ಶಿಶುವು ಆರೋಗ್ಯವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.