ADVERTISEMENT

ಮಹದೇಶ್ವರ ಬೆಟ್ಟ: ಎರಡು ದಿನ ದಾಸೋಹ ಇಲ್ಲ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 16:51 IST
Last Updated 19 ಆಗಸ್ಟ್ 2020, 16:51 IST

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನಾಲ್ವರು ನೌಕರರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ಪತ್ತೆಯಾಗಿರುವುದರಿಂದ, ಗುರುವಾರ ಮತ್ತು ಶುಕ್ರವಾರ ದಾಸೋಹ ಭವನವನ್ನು ಸೀಲ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಎರಡು ದಿನಗಳ ಕಾಲ ದೇವಾಲಯದಲ್ಲಿ ದಾಸೋಹದ ವ್ಯವಸ್ಥೆ ಇರುವುದಿಲ್ಲ.

ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಪ್ರಕಟಣೆಯಲ್ಲಿ ಈ ವಿಚಾರ ತಿಳಿಸಿದ್ದಾರೆ.

‘ಪ್ರಾಧಿಕಾರದ41 ನೌಕರರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ನಾಲ್ವರಲ್ಲಿ ಸೋಂಕು ಕಂಡು ಬಂದಿದೆ. ಇವರಲ್ಲಿ ಮೂವರು ದಾಸೋಹದ ಸಿಬ್ಬಂದಿ. ಇನ್ನೊಬ್ಬರು ಕಚೇರಿಯಲ್ಲಿ ಕೆಲಸ ಮಾಡುತ್ತಾರೆ. ಎರಡು ದಿನಗಳ ಕಾಲ ದಾಸೋಹ ಭವನವನ್ನು ಸೀಲ್‌ ಡೌನ್‌ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ, ದಾಸೋಹದ ವ್ಯವಸ್ಥೆ ಸ್ಥಗಿತಗೊಳ್ಳಲಿರುವುದರಿಂದ ಪ್ರಸಾದ ವಿತರಣೆ ಇರುವುದಿಲ್ಲ. ಕಚೇರಿಯನ್ನು ಒಂದು ದಿನ ಸೀಲ್‌ಡೌನ್‌ ಮಾಡಲಾಗುವುದು’ ಎಂದು ಅವರು ಹೇಳಿದ್ದಾರೆ.

ADVERTISEMENT

ದೇವಾಲಯ ಎಂದಿನಂತೆ ಭಕ್ತರಿಗೆ ತೆರೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ದರ್ಶನ ಪಡೆಯಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.