ಚಾಮರಾಜನಗರ: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಗುರುವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಭಾವಚಿತ್ರಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಪುಷ್ಪನಮನ ಸಲ್ಲಿಸಿದರು. ಬಳಿಕ ದುರಂತದಲ್ಲಿ ಮೃತಪಟ್ಟ ಎಲ್ಲ 13 ಮಂದಿ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷ ಮೌನ ಆಚರಣೆ ಮಾಡಿದರು.
ಬಳಿಕ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ‘ಭಾರತ ಸೇನೆಯ ಮುಖ್ಯಸ್ಥ ರಾವತ್ ಅವರು ಅಕಾಲಿಕ ಮರಣ ಭಾರತ ರಕ್ಷಣಾ ವಲಯಕ್ಕೆ ಭಾರಿ ನಷ್ಟ ಉಂಟಾಗಿದೆ. ಹೆಲಿಕಾಪ್ಟರ್ ದುರಂದಲ್ಲಿ 13 ಮಂದಿ ಸೇನಾಧಿಕಾರಿಗಳು ಸಾವೀಗಿಡಾಗಿರುವುದು ದುರ್ದೈವ. ದೇಶ ರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ವೀರಯೋಧರ ಧೈರ್ಯ, ಸಾಹಸ, ಅವರ ಸೇವೆ ಮಾದರಿಯಾಗಿದೆ’ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ. ಮರಿಸ್ವಾಮಿ,ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಮಾತನಾಡಿದರು.
ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್.ಮಹದೇವ್, ಬ್ಲಾಕ್ ಅಧ್ಯಕ್ಷ ಮಹಮದ್ ಅಸ್ಗರ್ ಅಲಿ ಮುನ್ನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೈಯದ್ ಮೊಸಾಹಿಬ್, ಎಸ್ಟಿ ಘಟಕದ ಅಧ್ಯಕ್ಷ ಮಹದೇವನಾಯಕ, ಮುಖಂಡರಾದ ಸುಹೇಲ್ ಅಲಿಖಾನ್, ಆಯುಬ್ ಖಾನ್, ಅರುಣ್ಕುಮಾರ್, ಶ್ರೀಕಾಂತ್, ಸಿ.ಎ. ಮಹದೇವಶೆಟ್ಟಿ, ವೆಂಕಟರಮಣನಾಯಕ, ನಾಗಾರ್ಜುನ, ಪೃಥ್ವಿ, ಸಿ.ಕೆ.ರವಿಕುಮಾರ್, ಅಬ್ಬಾಸ್ ನಿಕ್ವಿ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.