ADVERTISEMENT

ಚಾಮರಾಜನಗರ: ಗಾಂಜಾ ಮಾರಾಟ ಯತ್ನ, ಒಬ್ಬನ ಬಂಧನ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 15:35 IST
Last Updated 17 ಆಗಸ್ಟ್ 2021, 15:35 IST
ಅಬಕಾರಿ ಪೊಲೀಸರು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿರುವುದು
ಅಬಕಾರಿ ಪೊಲೀಸರು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿರುವುದು   

ಚಾಮರಾಜನಗರ: ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ತಾಲ್ಲೂಕಿನ ಪುಣಜನೂರು ವ್ಯಾಪ್ತಿಯ ಬಾನವಾಡಿ ಗ್ರಾಮದಲ್ಲಿ ಅಬಕಾರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಚಿಕ್ಕಣ್ಣ ಬಂಧಿತ ವ್ಯಕ್ತಿ. ಅವರ ಬಳಿಯಿಂದ 210 ಗ್ರಾಂ ಒಣ ಗಾಂಜಾ ಜಪ್ತಿ ಮಾಡಲಾಗಿದೆ. ಅರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಬಕಾರಿ ಇನ್‌ಸ್ಪೆಕ್ಟರ್‌ ಸಿ.ಎಂ.ಮಹದೇವು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಹನುವಂತ ಸಿಂಗ್, ಸಿಬ್ಬಂದಿಗಳಾದ ಸಿದ್ದರಾಜು, ಯಶೋಧ, ಸಂತೋಷ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.